ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೊಡಲೇ ಅರ್ಜಿ ಸಲ್ಲಿಸಿ..! Apply Now..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಸರ್ಕಾರಗಳಿಂದ ಬರುವಂತಹ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಸರ್ಕಾರಿ ಉದ್ಯೋಗದ ಬಗ್ಗೆ ತಿಳಿಯೋಣ ಬನ್ನಿ..

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಯೋಜನೆಗಳಡಿ ಸಮಾಲೋಚಕರ ಭರ್ತಿಗೆ ಇದೀಗ ನೇಮಕ ಅಧಿಸೂಚನೆಯನ್ನು ಪ್ರಕಟಿಸಿದೆ.

ಹುದ್ದೆಗಳನ್ನು ಇಲಾಖೆಯ ಜಿಲ್ಲಾ ತಾಂತ್ರಿಕ ಸಹಾಯಕರ ಘಟಕಗಳಲ್ಲಿ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ತಾಂತ್ರಿಕ, ತಾಂತ್ರಿಕೇತರ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಮಾಸಿಕ ರೂ.50,000 ದಿಂದ ರೂ.75,000 ವರೆಗೆ ವೇತನವನ್ನು ನೀಡಲಾಗುತ್ತದೆ. ಆಸಕ್ತರು ಹುದ್ದೆಗಳ ವಿವರ, ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆ

ಸಂಗ್ರಹಣೆ ಸಮಾಲೋಚಕರು : ಬಿಇ ಅಥವಾ ಬಿ.ಟೆಕ್‌ ಇನ್ ಸಿವಿಲ್ ಜತೆಗೆ ಕನಿಷ್ಠ 5 ವರ್ಷ ಕಾರ್ಯಾನುಭವ. ಅಥವಾ ಸರ್ಕಾರಿ ಇಲಾಖೆಗಳಲ್ಲಿ ಕನಿಷ್ಠ 2 ವರ್ಷ ಕಾರ್ಯಾನುಭವ.


ಪರಿವೀಕ್ಷಣಾ ಮತ್ತು ಮೌಲ್ಯಮಾಪನ ಸಮಾಲೋಚಕರು : ಬಿಸಿಎ / ಬಿಇ (ಸಿಎಸ್‌ / ಐಟಿ) ಜತೆಗೆ 5 ವರ್ಷ ಕಾರ್ಯಾನುಭವವನ್ನು ಪಡೆದಿರಬೇಕು. ಅಥವಾ ಕನಿಷ್ಠ 2 ವರ್ಷ ಸರ್ಕಾರಿ ವಲಯದಲ್ಲಿ ಕಾರ್ಯಾನುಭವ ಪಡೆದಿರಬೇಕು.


ಪರಿಸರ ಸಮಾಲೋಚಕರು : 

ಬಿಇ / ಬಿ.ಟೆಕ್ / ಎಂ.ಟೆಕ್ ಅನ್ನು ಪರಿಸರ ಇಂಜಿನಿಯರಿಂಗ್ ವಿಷಯದಲ್ಲಿ ಪಡೆದಿರಬೇಕು. ಕನಿಷ್ಠ 5 ವರ್ಷ ಕಾರ್ಯಾನುಭವ ಅಥವಾ ಕನಿಷ್ಠ 2 ವರ್ಷ ಸರ್ಕಾರಿ ವಲಯದಲ್ಲಿ ಕಾರ್ಯಾನುಭವ ಹೊಂದಿರಬೇಕು.

ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮೀಣ, ಹಾವೇರಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ವಿಜಯನಗರ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಗಳೂರು, ರಾಮನಗರ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಧಾರವಾಡ, ಬೀದರ್, ಕಲಬುರಗಿ ಜಿಲ್ಲೆಗಳು.

ಹುದ್ದೆ ಅವಧಿ: ಮೊದಲಿಗೆ 1 ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನಂತರ ಇಲಾಖೆಯ ಬೇಡಿಕೆ ಅನುಸಾರ, ಕಾರ್ಯದಕ್ಷತೆ ಉಳ್ಳವರಿಗೆ ಹುದ್ದೆಯ ಅವಧಿಯನ್ನು ಪ್ರತಿವರ್ಷ ಅಗತ್ಯಕ್ಕೆ ಅನುಗುಣವಾಗಿ ವಿಸ್ತರಣೆ ಮಾಡುವ ಅವಕಾಶ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
– ವೆಬ್‌ ಪೋರ್ಟಲ್‌

https://www.ksrwspdtsuonline.in/jobapplicationform ಗೆ ಭೇಟಿ ನೀಡಿ, ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-09-2024

Leave a Comment